25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!