30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!