September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

ಮರೋಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮರೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾವು ಮರೋಡಿ ಗ್ರಾಮ ಪಂಚಾಯತಿಗೆ ಆಗಮಿಸಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣಾನ್ ಇವರು ಹೂ ಮಾಲೆ ಹಾಕುವ ಮುಖಾಂತರ ಜಾಥಾವನ್ನು ಸ್ವಾಗತಿಸಿದರು. ನಾಡಗೀತೆಯೊಂದಿಗೆ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಗ್ರಾಮ ಪಂಚಾಯತು ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮಶ್ರೀ ಜೈನ್, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಯಶೋಧಾ, ಹೊಸಂಗಡಿ ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ, ಮುಂಡಾಜೆ ವಸತಿ ಶಾಲೆಯ ಪ್ರಾಂಶುಪಾಲರು. ಮಾವಿನಕಟ್ಟೆ ಮತ್ತು ಮರೋಡಿ ಶಾಲೆಯ ಮುಖ್ಯೋಪಾಧ್ಯಾಯರು, ನರೇಗಾ ತಾಲೂಕು ಐಇಸಿ ಸಂಯೋಜಕರಾದ ಶ್ರೀಮತಿ ವಿನಿಷಾ, ತಾಲೂಕು ವಿವಿಧ ಸಂಘಟನೆಗಳ ಮುಖಂಡರು, ಎನ್ ಆರ್ ಎಲ್ ಎಂ ಸಂಘದ ಅಧ್ಯಕ್ಷರಾದ ಶ್ರೀಮತಿ ವನಿತಾ, ಎಲ್ ಸಿ ಆರ್ ಪಿ. ಎಮ್ ಬಿ ಕೆ. ಸದಸ್ಯರು, ಗ್ರಾಮದ ಗಣ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಾವಿನಕಟ್ಟೆ ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬಣ್ಣಾನ್ ಇವರು ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾವಿನಕಟ್ಟೆ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಬಹುಮಾನ ನೀಡಿ ಅಭಿನಂದಿಸಿದರು. ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.

ಡಾ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಪಂಚಾಯತ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.

Related posts

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!