23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya
error: Content is protected !!