ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಅವರಿಗೆ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಅಭಿನಂದನೆ ಸಲ್ಲಿಸುತ್ತದೆ ಎಂದು ಸಿಪಿಐಎಂ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.


ಶ್ರೀಮತಿ ಈಶ್ವರಿ ಅವರು ಡಿ.ಹೆಚ್.ಎಸ್ ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ, ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯೆ, ಹಾಗೂ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿ ಈಗಾಗಲೇ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ.

Leave a Comment

error: Content is protected !!