July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!