ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ. ಮತ್ತು ಪದಾಧಿಕಾರಿಗಳು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕರಕುಶಲ ಕೌಶಲ್ಯಗಳ ಮಾಹಿತಿಯನ್ನು ಪಡೆದರು.

ಸಂಸ್ಥೆಯ ಮೇಲ್ವಿಚಾರಕಿ ಹಾಗೂ ಮನಶಾಸ್ತ್ರಜ್ಞ ಶ್ರೀಮತಿ ಮಲ್ಲಿಕಾ ಸುಮಾರು 41 ಎಂಡೋ ಸಂತ್ರಸ್ತರಲ್ಲಿ ಒಳಗೊಂಡಂತೆ, 13 ಜನ ಸೇವಾ ಸಿಬ್ಬಂದಿ, ವಿವಿಧ ವಿಭಾಗಗಳಲ್ಲಿ ಅಂದರೆ ಫಿಜಿಯೋಥೆರಪಿ ,ವಾಕ್ ತರಬೇತಿ, ವಿವಿಧ ಕರಕುಶಲ ಕೌಶಲ್ಯಗಳ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಪ್ರಸಾದ್ ಬಿ.ಎಸ್, ಸದಸ್ಯರಾದ ವಿಜಯ್ ನಿಡಿಗಲ್, ಗುರುಪ್ರಸಾದ್ ಉಜಿರೆ ಉಪಸ್ಥಿತರಿದ್ದರು.

Leave a Comment

error: Content is protected !!