25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

ಚಾರ್ಮಾಡಿ ಗ್ರಾಮ‌ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಸಹಾಯಕ ನಿರ್ದೇಶಕ ಜೋಸೆಫ್ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ನೀಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮರವರು ಸ್ವಾಗತಿಸಿದರು. ಕಾರ್ಯದರ್ಶಿಯವರು ಅನುಪಾಲನ ವರದಿಯನ್ನು ಸಭೆಯ ಮುಂದಿಟ್ಟರು.

ಕುಡಿಯುವ ನೀರು ಸರಿಯಾಗಿ ಸರಬುರಾಜು ಆಗುತ್ತಿಲ್ಲ. ಕರೆಂಟ್ ಇಲ್ಲದಿದ್ದರೆ ನೀರು ಬರುವಾಗ ಲೇಟ್ ಆಗುತ್ತಿದೆ. ಕಳೆದ ಮೂರು ಅವಧಿಯಿಂದ ನೀರಿನ ಸಮಸ್ಯೆ ಬಗ್ಗೆ ತಿಳಿಸಿದರು. ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಗ್ರಾಮಸ್ಥರು ಪಂಚಾಯತ್ ನ್ನು ಪ್ರಶ್ನಿಸಿದರು. ಕೂಡಲೇ ಸರಿಪಡಿಸುವ ಭರವಸೆಯನ್ನು ಪಿಡಿಓ ನೀಡಿದರು.

ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿದೆ ಇರುವುದರಿಂದ ಬೆಳಿಗ್ಗೆ ವಾಕಿಂಗ್ ಹೋಗುವಾಗ ಕಷ್ಟವಾಗುತ್ತಿದೆ. ಬೀದಿ ದೀಪ ವಿಸ್ತರಿಸುವಂತೆ ಗ್ರಾಮಸ್ಥರೊರ್ವರು ಒತ್ತಾಯಿಸಿದರು.

ಸರಕಾರಿ ಆಸ್ಪತ್ರೆಗೆ ಸಂಚರಿಸುವ ರಸ್ತೆಯು ಅವ್ಯವಸ್ಥೆಯಿಂದ ಕೂಡಿದ್ದು ಕೂಡಲೇ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಚಾರ್ಮಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ಥಳಿಯ 11 ಅಂಗನವಾಡಿ ಕೇಂದ್ರಗಳಿಗೆ ತಲಾ 10 ರಂತೆ ಮಕ್ಕಳು ಕುಳಿತುಕೊಳ್ಳುವ ಚಯರ್ ನೀಡಲಾಯಿತು.

Related posts

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!