25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

ಚಾರ್ಮಾಡಿ ಗ್ರಾಮ‌ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಸಹಾಯಕ ನಿರ್ದೇಶಕ ಜೋಸೆಫ್ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ನೀಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮರವರು ಸ್ವಾಗತಿಸಿದರು. ಕಾರ್ಯದರ್ಶಿಯವರು ಅನುಪಾಲನ ವರದಿಯನ್ನು ಸಭೆಯ ಮುಂದಿಟ್ಟರು.

ಕುಡಿಯುವ ನೀರು ಸರಿಯಾಗಿ ಸರಬುರಾಜು ಆಗುತ್ತಿಲ್ಲ. ಕರೆಂಟ್ ಇಲ್ಲದಿದ್ದರೆ ನೀರು ಬರುವಾಗ ಲೇಟ್ ಆಗುತ್ತಿದೆ. ಕಳೆದ ಮೂರು ಅವಧಿಯಿಂದ ನೀರಿನ ಸಮಸ್ಯೆ ಬಗ್ಗೆ ತಿಳಿಸಿದರು. ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಗ್ರಾಮಸ್ಥರು ಪಂಚಾಯತ್ ನ್ನು ಪ್ರಶ್ನಿಸಿದರು. ಕೂಡಲೇ ಸರಿಪಡಿಸುವ ಭರವಸೆಯನ್ನು ಪಿಡಿಓ ನೀಡಿದರು.

ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿದೆ ಇರುವುದರಿಂದ ಬೆಳಿಗ್ಗೆ ವಾಕಿಂಗ್ ಹೋಗುವಾಗ ಕಷ್ಟವಾಗುತ್ತಿದೆ. ಬೀದಿ ದೀಪ ವಿಸ್ತರಿಸುವಂತೆ ಗ್ರಾಮಸ್ಥರೊರ್ವರು ಒತ್ತಾಯಿಸಿದರು.

ಸರಕಾರಿ ಆಸ್ಪತ್ರೆಗೆ ಸಂಚರಿಸುವ ರಸ್ತೆಯು ಅವ್ಯವಸ್ಥೆಯಿಂದ ಕೂಡಿದ್ದು ಕೂಡಲೇ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಚಾರ್ಮಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ಥಳಿಯ 11 ಅಂಗನವಾಡಿ ಕೇಂದ್ರಗಳಿಗೆ ತಲಾ 10 ರಂತೆ ಮಕ್ಕಳು ಕುಳಿತುಕೊಳ್ಳುವ ಚಯರ್ ನೀಡಲಾಯಿತು.

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
error: Content is protected !!