September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ರಾಜವರ್ಮ ಜೈನ್ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮ್ಯಾನೇಜರ್ ಮತ್ತು ಇತರ ಅಧಿಕಾರಿ ವರ್ಗದವರು, ದಲಿತ ಮುಖಂಡರುಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, NRLM ಸಂಜೀವಿನಿ ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು, ಪಧಾಧಿಕಾರಿಗಳು, ಶಾಲಾ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಊರ ಗಣ್ಯರು ಭಾಗವಹಿಸಿದರು. ಸಂವಿಧಾನದ ಜಾಗೃತಿ ಬಗ್ಗೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ವಿವಿಧ ಸ್ಪರ್ದೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!