July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲೆಗಳನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಜತೆಗೆ ವೈಯಕ್ತಿಕ, ಸಾಮೂಹಿಕ ಬೆಂಬಲ ಮತ್ತು ಸಂಪನ್ಮೂಲಗಳು ದೊರಕಿಸಿದರೆ, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಕಾರ್ಯಕ್ರಮ. ರೂಪಿಸಿದೆ. ಶಾಲೆಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿರುವ ಹಳೇ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಯ ಪಾರಂಪರಿಕ ಹಿನ್ನೆಲೆಯೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಮಾ.31ರೊಳಗೆ ರಚಿಸಲು ನಿರ್ದೇಶನ ನೀಡಿದೆ.

ಈ ಮೂಲಕ ಶಾಲೆಗೆ ಅಗತ್ಯವಿರುವ ಗ್ರಂಥಾಲಯ, ಪ್ರಯೋಗಾಲಯ, ಪೀಠೋಪಕರಣ, ಸ್ಮಾರ್ಟ್ ಕ್ಲಾಸ್, ಇ-ಕಲಿಕಾ ಕೇಂದ್ರ ಸ್ಥಾಪನೆಯಂತಹ ಸೌಲಭ್ಯಗಳ ಪೂರೈಕೆ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಹಳೇ ವಿದ್ಯಾರ್ಥಿಗಳಿಂದ ಪೂರೈಸಿಕೊಳ್ಳುವಂತೆ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!