ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲೆಗಳನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಜತೆಗೆ ವೈಯಕ್ತಿಕ, ಸಾಮೂಹಿಕ ಬೆಂಬಲ ಮತ್ತು ಸಂಪನ್ಮೂಲಗಳು ದೊರಕಿಸಿದರೆ, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಕಾರ್ಯಕ್ರಮ. ರೂಪಿಸಿದೆ. ಶಾಲೆಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿರುವ ಹಳೇ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಯ ಪಾರಂಪರಿಕ ಹಿನ್ನೆಲೆಯೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಮಾ.31ರೊಳಗೆ ರಚಿಸಲು ನಿರ್ದೇಶನ ನೀಡಿದೆ.

ಈ ಮೂಲಕ ಶಾಲೆಗೆ ಅಗತ್ಯವಿರುವ ಗ್ರಂಥಾಲಯ, ಪ್ರಯೋಗಾಲಯ, ಪೀಠೋಪಕರಣ, ಸ್ಮಾರ್ಟ್ ಕ್ಲಾಸ್, ಇ-ಕಲಿಕಾ ಕೇಂದ್ರ ಸ್ಥಾಪನೆಯಂತಹ ಸೌಲಭ್ಯಗಳ ಪೂರೈಕೆ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಹಳೇ ವಿದ್ಯಾರ್ಥಿಗಳಿಂದ ಪೂರೈಸಿಕೊಳ್ಳುವಂತೆ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

Related posts

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!