25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲೆಗಳನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಜತೆಗೆ ವೈಯಕ್ತಿಕ, ಸಾಮೂಹಿಕ ಬೆಂಬಲ ಮತ್ತು ಸಂಪನ್ಮೂಲಗಳು ದೊರಕಿಸಿದರೆ, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಕಾರ್ಯಕ್ರಮ. ರೂಪಿಸಿದೆ. ಶಾಲೆಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿರುವ ಹಳೇ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಯ ಪಾರಂಪರಿಕ ಹಿನ್ನೆಲೆಯೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಮಾ.31ರೊಳಗೆ ರಚಿಸಲು ನಿರ್ದೇಶನ ನೀಡಿದೆ.

ಈ ಮೂಲಕ ಶಾಲೆಗೆ ಅಗತ್ಯವಿರುವ ಗ್ರಂಥಾಲಯ, ಪ್ರಯೋಗಾಲಯ, ಪೀಠೋಪಕರಣ, ಸ್ಮಾರ್ಟ್ ಕ್ಲಾಸ್, ಇ-ಕಲಿಕಾ ಕೇಂದ್ರ ಸ್ಥಾಪನೆಯಂತಹ ಸೌಲಭ್ಯಗಳ ಪೂರೈಕೆ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಹಳೇ ವಿದ್ಯಾರ್ಥಿಗಳಿಂದ ಪೂರೈಸಿಕೊಳ್ಳುವಂತೆ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

Related posts

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
error: Content is protected !!