22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

ಬೆಳ್ತಂಗಡಿ: ಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡುವ ಕುರಿತು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬೆಳ್ತಂಗಡಿ ತಹಸೀಲ್ದಾರ್ ಮೂಲಕ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ವತಿಯಿಂದ pಫೆ.7ರಂದು ಮನವಿ ಸಲ್ಲಿಸಲಾಯಿತು.


ಅರಣ್ಯ ಇಲಾಖೆಯ ಬೆಂಗಳೂರು ಕಚೇರಿಯಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸಮಾಜದ ಅನ್ನಪೂರ್ಣ ರಾನಡೆಯವರು ಶಿವಮೊಗ್ಗದಲ್ಲಿ ಇಲಾಖೆ ನಡೆಸಿದ ಸ್ಟೆನೋಗ್ರಾಫರ್ ಪರೀಕ್ಷೆ ಮೇಲ್ವಿಚಾರಕಿಯಾಗಿ ಆಗಮಿಸಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಘಟನೆ ನಡೆದಿತ್ತು. ಘಟನೆ ನಡೆದು ಒಂದು ವಾರ ಕಳೆದರು ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಿಲ್ಲ.ರೈಲು ಪ್ರಯಾಣ ಮಹಿಳೆಯರಿಗೆ ಎಷ್ಟು ಸುರಕ್ಷಿತ?, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಭದ್ರತೆ ಒದಗಿಸಬೇಕಾದ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿ ನಾರಾಯಣ ಫಡಕೆ, ಪದಾಧಿಕಾರಿಗಳಾದ ವಿವೇಕ್ ಕೇಳ್ಕರ್, ಯಶವಂತ ಪಟವರ್ಧನ್,ಯೋಗೀಶ್ ಭಿಡೆ,ಗಣೇಶ ಶೆಂಡ್ಯೆ,ಲಾಯಿಲ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಸೂರ್ಯನಾರಾಯಣ ಪಾಳಂದೆ, ಮುಂಡಾಜೆ ಗ್ರಾ.ಪಂ.ಮಾಜಿ ಸದಸ್ಯೆ
ಅಶ್ವಿನಿ ಹೆಬ್ಬಾರ್, ಲತಾ ಭಟ್ ಅರೆಕಲ್ಲು, ರಶ್ಮಿ ಪಟವರ್ಧನ್,ಡಾ.ದೀಪಾಲಿ ಡೋಂಗ್ರೆ, ತಾ.ಪಂ. ಮಾಜಿ ಸದಸ್ಯ ವಿಷ್ಣು ಮರಾಠೆ,ನ್ಯಾಯವಾದಿ ಶೈಲೇಶ್ ಠೋಸರ್, ಪತ್ರಕರ್ತ ಅರವಿಂದ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya
error: Content is protected !!