25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ಫೆ.6ರಂದು ನಡೆದಿದೆ.

ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್‌ (30) ಎಂಬವರ ದೂರಿನಂತೆ, ಫೆ;05 ರಂದು ತನ್ನ ಬಾಬ್ತು ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಆ ದಿನ ರಾತ್ರಿ, ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿರುತ್ತಾರೆ. ಮರುದಿನ ಫೆ.06 ರಂದು ಬೆಳಿಗ್ಗೆ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಯಾರೋ ಕಳ್ಳರು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲ;457,380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!