ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ಫೆ.6ರಂದು ನಡೆದಿದೆ.

ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್‌ (30) ಎಂಬವರ ದೂರಿನಂತೆ, ಫೆ;05 ರಂದು ತನ್ನ ಬಾಬ್ತು ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಆ ದಿನ ರಾತ್ರಿ, ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿರುತ್ತಾರೆ. ಮರುದಿನ ಫೆ.06 ರಂದು ಬೆಳಿಗ್ಗೆ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಯಾರೋ ಕಳ್ಳರು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲ;457,380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ನಿಡ್ಲೆ: ನೆಡಿಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ; ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!