25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ಫೆ.6ರಂದು ನಡೆದಿದೆ.

ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್‌ (30) ಎಂಬವರ ದೂರಿನಂತೆ, ಫೆ;05 ರಂದು ತನ್ನ ಬಾಬ್ತು ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಆ ದಿನ ರಾತ್ರಿ, ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿರುತ್ತಾರೆ. ಮರುದಿನ ಫೆ.06 ರಂದು ಬೆಳಿಗ್ಗೆ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಯಾರೋ ಕಳ್ಳರು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲ;457,380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya
error: Content is protected !!