July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ಫೆ.6ರಂದು ನಡೆದಿದೆ.

ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್‌ (30) ಎಂಬವರ ದೂರಿನಂತೆ, ಫೆ;05 ರಂದು ತನ್ನ ಬಾಬ್ತು ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಆ ದಿನ ರಾತ್ರಿ, ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿರುತ್ತಾರೆ. ಮರುದಿನ ಫೆ.06 ರಂದು ಬೆಳಿಗ್ಗೆ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಯಾರೋ ಕಳ್ಳರು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲ;457,380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
error: Content is protected !!