25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ಫೆ.6ರಂದು ನಡೆದಿದೆ.

ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್‌ (30) ಎಂಬವರ ದೂರಿನಂತೆ, ಫೆ;05 ರಂದು ತನ್ನ ಬಾಬ್ತು ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಆ ದಿನ ರಾತ್ರಿ, ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿರುತ್ತಾರೆ. ಮರುದಿನ ಫೆ.06 ರಂದು ಬೆಳಿಗ್ಗೆ ತಾಯಿ ಮನೆಗೆ ಬಂದು ನೋಡಿದಾಗ ಮನೆಯ ಹಂಚು ತೆರೆದು ಯಾರೋ ಕಳ್ಳರು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲ;457,380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!