24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್‌ ಬಳಿ ಅರುಣ್‌ ಎಂಬುವವರು ಟಿಪ್ಪರ್‌ ಲಾರಿಯನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಆಟೋರಿಕ್ಷಾದಲ್ಲಿದ್ದವರಿಗೆ ಗಾಯಗಳಾದ ಘಟನೆ ಫೆ.6 ರಂದು ನಡೆದಿದೆ.

ಪುತ್ತಿಲ ಗ್ರಾಮದ ಸುಜೀರ್‌ ಮಹಮ್ಮದ್‌ ಪೈಝಲ್‌ (38) ಎಂಬವರ ದೂರಿನಂತೆ, ಫೆ 06 ರಂದು ಮಧ್ಯಾಹ್ನ ಆರೋಪಿ ಟಿಪ್ಪರ್‌ ಲಾರಿ ಚಾಲಕ ಅರುಣ್‌ ಎಂಬವರು, KA-21-C-3149 ನೇ ನೋಂದಣಿ ನಂಬ್ರದ ಟಿಪ್ಪರ್‌ ಲಾರಿಯನ್ನು ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್‌ ಬಳಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಅಬ್ಬಾಸ್ ಎಂಬವರು ಚಾಲಕರಾಗಿ ಅಶ್ರಫ್‌ ಕಲ್ಲೇರಿ, ಅನ್ನತ್‌ ಬೀಬಿ ಹಾಗೂ ಮಹಮ್ಮದ್‌ ನೌಮಾನ್‌ (3.5ವರ್ಷ) ಎಂಬವರನ್ನು ಪ್ರಯಾಣಿಕರಾಗಿ ಕುಳ್ಳಿರಿಸಿಕೊಂಡು ಚಲಾಯಿಸಿಕೊಂಡು ಬರುತ್ತಿದ್ದ KA-21-B-9922 ನೇ ನೋಂದಣಿ ನಂಬ್ರದ ಆಟೋರಿಕ್ಷಾಕ್ಕೆ ಅಪಘಾತವಾಗಿರುತ್ತದೆ. ಪರಿಣಾಮ ಆಟೋರಿಕ್ಷಾದಲ್ಲಿದ್ದ ಅಶ್ರಫ್‌ ಕಲ್ಲೇರಿ ರವರಿಗೆ, ಅನ್ನತ್‌ ಬೀಬಿ ಮತ್ತು ನೌಮಾನ್‌ ರವರಿಗೆ ರಕ್ತಗಾಯಗಳಾಗಿದ್ದು, ಆಟೋರಿಕ್ಷಾದ ಚಾಲಕ ಅಬ್ಬಾಸ್ ರವರಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಗಾಯಾಳುಗಳಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ, ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಸಂಖ್ಯೆ: 17/2024 ಕಲಂ: 279, 337 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya
error: Content is protected !!