24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್‌ ಬಳಿ ಅರುಣ್‌ ಎಂಬುವವರು ಟಿಪ್ಪರ್‌ ಲಾರಿಯನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಆಟೋರಿಕ್ಷಾದಲ್ಲಿದ್ದವರಿಗೆ ಗಾಯಗಳಾದ ಘಟನೆ ಫೆ.6 ರಂದು ನಡೆದಿದೆ.

ಪುತ್ತಿಲ ಗ್ರಾಮದ ಸುಜೀರ್‌ ಮಹಮ್ಮದ್‌ ಪೈಝಲ್‌ (38) ಎಂಬವರ ದೂರಿನಂತೆ, ಫೆ 06 ರಂದು ಮಧ್ಯಾಹ್ನ ಆರೋಪಿ ಟಿಪ್ಪರ್‌ ಲಾರಿ ಚಾಲಕ ಅರುಣ್‌ ಎಂಬವರು, KA-21-C-3149 ನೇ ನೋಂದಣಿ ನಂಬ್ರದ ಟಿಪ್ಪರ್‌ ಲಾರಿಯನ್ನು ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್‌ ಬಳಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಅಬ್ಬಾಸ್ ಎಂಬವರು ಚಾಲಕರಾಗಿ ಅಶ್ರಫ್‌ ಕಲ್ಲೇರಿ, ಅನ್ನತ್‌ ಬೀಬಿ ಹಾಗೂ ಮಹಮ್ಮದ್‌ ನೌಮಾನ್‌ (3.5ವರ್ಷ) ಎಂಬವರನ್ನು ಪ್ರಯಾಣಿಕರಾಗಿ ಕುಳ್ಳಿರಿಸಿಕೊಂಡು ಚಲಾಯಿಸಿಕೊಂಡು ಬರುತ್ತಿದ್ದ KA-21-B-9922 ನೇ ನೋಂದಣಿ ನಂಬ್ರದ ಆಟೋರಿಕ್ಷಾಕ್ಕೆ ಅಪಘಾತವಾಗಿರುತ್ತದೆ. ಪರಿಣಾಮ ಆಟೋರಿಕ್ಷಾದಲ್ಲಿದ್ದ ಅಶ್ರಫ್‌ ಕಲ್ಲೇರಿ ರವರಿಗೆ, ಅನ್ನತ್‌ ಬೀಬಿ ಮತ್ತು ನೌಮಾನ್‌ ರವರಿಗೆ ರಕ್ತಗಾಯಗಳಾಗಿದ್ದು, ಆಟೋರಿಕ್ಷಾದ ಚಾಲಕ ಅಬ್ಬಾಸ್ ರವರಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಗಾಯಾಳುಗಳಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ, ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಸಂಖ್ಯೆ: 17/2024 ಕಲಂ: 279, 337 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!