July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

ಚಾರ್ಮಾಡಿ ಗ್ರಾಮ‌ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಸಹಾಯಕ ನಿರ್ದೇಶಕ ಜೋಸೆಫ್ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ನೀಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮರವರು ಸ್ವಾಗತಿಸಿದರು. ಕಾರ್ಯದರ್ಶಿಯವರು ಅನುಪಾಲನ ವರದಿಯನ್ನು ಸಭೆಯ ಮುಂದಿಟ್ಟರು.

ಕುಡಿಯುವ ನೀರು ಸರಿಯಾಗಿ ಸರಬುರಾಜು ಆಗುತ್ತಿಲ್ಲ. ಕರೆಂಟ್ ಇಲ್ಲದಿದ್ದರೆ ನೀರು ಬರುವಾಗ ಲೇಟ್ ಆಗುತ್ತಿದೆ. ಕಳೆದ ಮೂರು ಅವಧಿಯಿಂದ ನೀರಿನ ಸಮಸ್ಯೆ ಬಗ್ಗೆ ತಿಳಿಸಿದರು. ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಗ್ರಾಮಸ್ಥರು ಪಂಚಾಯತ್ ನ್ನು ಪ್ರಶ್ನಿಸಿದರು. ಕೂಡಲೇ ಸರಿಪಡಿಸುವ ಭರವಸೆಯನ್ನು ಪಿಡಿಓ ನೀಡಿದರು.

ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿದೆ ಇರುವುದರಿಂದ ಬೆಳಿಗ್ಗೆ ವಾಕಿಂಗ್ ಹೋಗುವಾಗ ಕಷ್ಟವಾಗುತ್ತಿದೆ. ಬೀದಿ ದೀಪ ವಿಸ್ತರಿಸುವಂತೆ ಗ್ರಾಮಸ್ಥರೊರ್ವರು ಒತ್ತಾಯಿಸಿದರು.

ಸರಕಾರಿ ಆಸ್ಪತ್ರೆಗೆ ಸಂಚರಿಸುವ ರಸ್ತೆಯು ಅವ್ಯವಸ್ಥೆಯಿಂದ ಕೂಡಿದ್ದು ಕೂಡಲೇ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಚಾರ್ಮಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ಥಳಿಯ 11 ಅಂಗನವಾಡಿ ಕೇಂದ್ರಗಳಿಗೆ ತಲಾ 10 ರಂತೆ ಮಕ್ಕಳು ಕುಳಿತುಕೊಳ್ಳುವ ಚಯರ್ ನೀಡಲಾಯಿತು.

Related posts

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya
error: Content is protected !!