22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ರಾಜವರ್ಮ ಜೈನ್ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮ್ಯಾನೇಜರ್ ಮತ್ತು ಇತರ ಅಧಿಕಾರಿ ವರ್ಗದವರು, ದಲಿತ ಮುಖಂಡರುಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, NRLM ಸಂಜೀವಿನಿ ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು, ಪಧಾಧಿಕಾರಿಗಳು, ಶಾಲಾ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಊರ ಗಣ್ಯರು ಭಾಗವಹಿಸಿದರು. ಸಂವಿಧಾನದ ಜಾಗೃತಿ ಬಗ್ಗೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ವಿವಿಧ ಸ್ಪರ್ದೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya
error: Content is protected !!