25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲೆಗಳನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಜತೆಗೆ ವೈಯಕ್ತಿಕ, ಸಾಮೂಹಿಕ ಬೆಂಬಲ ಮತ್ತು ಸಂಪನ್ಮೂಲಗಳು ದೊರಕಿಸಿದರೆ, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಕಾರ್ಯಕ್ರಮ. ರೂಪಿಸಿದೆ. ಶಾಲೆಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿರುವ ಹಳೇ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಯ ಪಾರಂಪರಿಕ ಹಿನ್ನೆಲೆಯೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಮಾ.31ರೊಳಗೆ ರಚಿಸಲು ನಿರ್ದೇಶನ ನೀಡಿದೆ.

ಈ ಮೂಲಕ ಶಾಲೆಗೆ ಅಗತ್ಯವಿರುವ ಗ್ರಂಥಾಲಯ, ಪ್ರಯೋಗಾಲಯ, ಪೀಠೋಪಕರಣ, ಸ್ಮಾರ್ಟ್ ಕ್ಲಾಸ್, ಇ-ಕಲಿಕಾ ಕೇಂದ್ರ ಸ್ಥಾಪನೆಯಂತಹ ಸೌಲಭ್ಯಗಳ ಪೂರೈಕೆ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಹಳೇ ವಿದ್ಯಾರ್ಥಿಗಳಿಂದ ಪೂರೈಸಿಕೊಳ್ಳುವಂತೆ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

Related posts

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya
error: Content is protected !!