22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

ಬೆಳ್ತಂಗಡಿ: ಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡುವ ಕುರಿತು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬೆಳ್ತಂಗಡಿ ತಹಸೀಲ್ದಾರ್ ಮೂಲಕ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ವತಿಯಿಂದ pಫೆ.7ರಂದು ಮನವಿ ಸಲ್ಲಿಸಲಾಯಿತು.


ಅರಣ್ಯ ಇಲಾಖೆಯ ಬೆಂಗಳೂರು ಕಚೇರಿಯಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸಮಾಜದ ಅನ್ನಪೂರ್ಣ ರಾನಡೆಯವರು ಶಿವಮೊಗ್ಗದಲ್ಲಿ ಇಲಾಖೆ ನಡೆಸಿದ ಸ್ಟೆನೋಗ್ರಾಫರ್ ಪರೀಕ್ಷೆ ಮೇಲ್ವಿಚಾರಕಿಯಾಗಿ ಆಗಮಿಸಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಘಟನೆ ನಡೆದಿತ್ತು. ಘಟನೆ ನಡೆದು ಒಂದು ವಾರ ಕಳೆದರು ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಿಲ್ಲ.ರೈಲು ಪ್ರಯಾಣ ಮಹಿಳೆಯರಿಗೆ ಎಷ್ಟು ಸುರಕ್ಷಿತ?, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಭದ್ರತೆ ಒದಗಿಸಬೇಕಾದ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿ ನಾರಾಯಣ ಫಡಕೆ, ಪದಾಧಿಕಾರಿಗಳಾದ ವಿವೇಕ್ ಕೇಳ್ಕರ್, ಯಶವಂತ ಪಟವರ್ಧನ್,ಯೋಗೀಶ್ ಭಿಡೆ,ಗಣೇಶ ಶೆಂಡ್ಯೆ,ಲಾಯಿಲ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಸೂರ್ಯನಾರಾಯಣ ಪಾಳಂದೆ, ಮುಂಡಾಜೆ ಗ್ರಾ.ಪಂ.ಮಾಜಿ ಸದಸ್ಯೆ
ಅಶ್ವಿನಿ ಹೆಬ್ಬಾರ್, ಲತಾ ಭಟ್ ಅರೆಕಲ್ಲು, ರಶ್ಮಿ ಪಟವರ್ಧನ್,ಡಾ.ದೀಪಾಲಿ ಡೋಂಗ್ರೆ, ತಾ.ಪಂ. ಮಾಜಿ ಸದಸ್ಯ ವಿಷ್ಣು ಮರಾಠೆ,ನ್ಯಾಯವಾದಿ ಶೈಲೇಶ್ ಠೋಸರ್, ಪತ್ರಕರ್ತ ಅರವಿಂದ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya
error: Content is protected !!