July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

ದ ಕ ಜಿಲ್ಲಾ ಪಂಚಾಯತ್ , ತಾ ಪಂ ಬೆಳ್ತಂಗಡಿ, ಸಮಾಜಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಬಳಂಜ
ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ. 08 ರಂದು ಬಳಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.


ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಮಾಧವ್ ಜಾಥ ಕೆಕೆ ಚಾಲನೆ ನೀಡಿದರು..


ಪಂಚಾಯತ್ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ, ಸದಸ್ಯರಾದ ರವೀಂದ್ರ ಅಮೀನ್, ಬೇಬಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ಮ್ಯಾನೇಜರ್ ಧನಂಜಯ್, ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿ ಒಕ್ಕೂಟದ ಪದಾಧಿಕಾರಿಗಳು,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಳಂಜ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ತಾಲೂಕು ಐಇಸಿ ಸಂಯೋಜಕಿ ವಿನಿಷ, ಪುನರ್ವಸತಿ ಕಾರ್ಯಕರ್ತೆ, ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಬುದ್ಧ ಬಸವ ಟ್ರಸ್ಟ್ ನ ಚೆನ್ನ ಕೇಶವ ಮುಂತಾದವರು ಭಾಗವಹಿಸಿದ್ದರು. ಸಂವಿಧಾನದ ಪ್ರಸ್ತಾವನೆಯನ್ನು ಸಹಾಯಕ ನಿರ್ದೇಶಕರು ಬೋಧಿಸಿದರು.


ಸಂವಿಧಾನ ಕುರಿತಾದ ಸ್ಪರ್ಧೆಗಳ ವಿಜೇತರಿಗೆ ಅಭಿನಂದಿಸಲಾಯಿತು.
ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಗೀತೆ ಮತ್ತು ನಾಟಕಗಳನ್ನು ಪ್ರದರ್ಶಿಸಲಾಯಿತು.
ನಂತರ ಬಳಂಜ ದವರೆಗೆ ಸಂವಿಧಾನ ಜಾಗೃತಿ ಮೆರವಣಿಗೆ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿನಂದಿಸಿದರು.

Related posts

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!