September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಫೆ.7ರಂದು ಜರಗಿತು.

NRLM ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳಿಂದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಹಾಗೂ ಪ್ರತಿಮೆಗೆ ಹಾರಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಲಾಯಿತು. ಸಂವಿಧಾನ ಜಾಗೃತಿ ಕುರಿತು ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳು ಜಾಥಾ ಕಾರ್ಯಕ್ರಮದಲ್ಲಿ ಘೋಷವಾಕ್ಯಗಳನ್ನು ಕೂಗಿದರು. ಸಂವಿಧಾನ ಜಾಗೃತಿ ರಥವು ಕರಂಬಾರು ಗ್ರಾಮದ ಶಾಂತಿನಗರದಿಂದ ಹೊರಟು ಗ್ರಾಮ ಪಂಚಾಯತ್ ವಠಾರಕ್ಕೆ ಮೆರವಣಿಗೆಯ ಮೂಲಕ ಸಂಚರಿಸಿತು. ಸಂವಿಧಾನ ಜಾಗೃತಿ ಜಾಥಾ ಜೊತೆ ಬಂದ ಮಂಗಳೂರು ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮ್ಯಾನೇಜರ್ ಮತ್ತು ಇತರ ಅಧಿಕಾರಿ ವರ್ಗದವರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ಅಧ್ಯಕ್ಷರುಗಳು, ಶಿರ್ಲಾಲು ಹಾಗೂ ಕರಂಬಾರು ಶಾಲಾ ಶಿಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya
error: Content is protected !!