July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಕ್ಷೇತ್ರದ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸುವ ದೃಷ್ಟಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳನ್ನು ಫೆ.06 ರಂದು ಕ್ಷೇತ್ರದ ಕಚೇರಿಯಲ್ಲಿ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ವ್ಯವಸ್ಥಾಪನ ಸಮಿತಿಯ ವತಿಯಿಂದ ಶಾಲು ಹೊದಿಸಿ ಸಿಹಿ ತಿಂಡಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಸಿಬ್ಬಂದಿಗಳು ಹಾಗೂ ಅರ್ಚಕರು ಸಮಿತಿಯ ಮೇಲೆ ಅತ್ಯಂತ ವಿಶ್ವಾಸವಿಟ್ಟು ಕೆಲಸವನ್ನು ನಿರ್ವಹಿಸಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರೀತಿ ವಿಶ್ವಾಸದಿಂದ ಸಮಿತಿಯ ಮೇಲೆ ವಿಶ್ವಾಸವಿಟ್ಟು ಎಲ್ಲರನ್ನೂ ಅತ್ಯಂತ ಗೌರವದಿಂದ ಕಾಣುತ್ತಾ ಕೆಲಸ ನಿರ್ವಹಿಸಿ ಗಣಪತಿಯ ಸೇವೆಯನ್ನು ಮಾಡಿದ ಸಮಿತಿಯ ಎಲ್ಲರನ್ನೂ ಭಾವನಾತ್ಮಕವಾಗಿ ಅಭಿನಂದಿಸಿದರು.


ಫೆ.07 ರಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಇವರ ಉಪಸ್ಥಿತಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು, ನಿರ್ಗಮಿತ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಅರ್ಚಕರು ಹಾಗೂ ಎಲ್ಲಾ ಸದಸ್ಯರನ್ನು ದೇವಳದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಇವರು ದೇವರ ಎದುರಿನಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ಸಮಿತಿಯ ಎಲ್ಲರಿಗೂ ಗಣಪತಿ ದೇವರು ಕರೆದಾಗ ರಾತ್ರಿ ಹಗಲು ಎನ್ನದೆ ಬಂದು ದೇವರ ಸೇವೆಯನ್ನು ಮಾಡಿದ ನಿಮ್ಮೆಲ್ಲರನ್ನು ಮಹಾ ಗಣಪತಿ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿ ಬೀಳ್ಕೊಟ್ಟರು.

Related posts

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya
error: Content is protected !!