ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಕ್ಷೇತ್ರದ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸುವ ದೃಷ್ಟಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳನ್ನು ಫೆ.06 ರಂದು ಕ್ಷೇತ್ರದ ಕಚೇರಿಯಲ್ಲಿ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ವ್ಯವಸ್ಥಾಪನ ಸಮಿತಿಯ ವತಿಯಿಂದ ಶಾಲು ಹೊದಿಸಿ ಸಿಹಿ ತಿಂಡಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಸಿಬ್ಬಂದಿಗಳು ಹಾಗೂ ಅರ್ಚಕರು ಸಮಿತಿಯ ಮೇಲೆ ಅತ್ಯಂತ ವಿಶ್ವಾಸವಿಟ್ಟು ಕೆಲಸವನ್ನು ನಿರ್ವಹಿಸಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರೀತಿ ವಿಶ್ವಾಸದಿಂದ ಸಮಿತಿಯ ಮೇಲೆ ವಿಶ್ವಾಸವಿಟ್ಟು ಎಲ್ಲರನ್ನೂ ಅತ್ಯಂತ ಗೌರವದಿಂದ ಕಾಣುತ್ತಾ ಕೆಲಸ ನಿರ್ವಹಿಸಿ ಗಣಪತಿಯ ಸೇವೆಯನ್ನು ಮಾಡಿದ ಸಮಿತಿಯ ಎಲ್ಲರನ್ನೂ ಭಾವನಾತ್ಮಕವಾಗಿ ಅಭಿನಂದಿಸಿದರು.


ಫೆ.07 ರಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಇವರ ಉಪಸ್ಥಿತಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು, ನಿರ್ಗಮಿತ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಅರ್ಚಕರು ಹಾಗೂ ಎಲ್ಲಾ ಸದಸ್ಯರನ್ನು ದೇವಳದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಇವರು ದೇವರ ಎದುರಿನಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ಸಮಿತಿಯ ಎಲ್ಲರಿಗೂ ಗಣಪತಿ ದೇವರು ಕರೆದಾಗ ರಾತ್ರಿ ಹಗಲು ಎನ್ನದೆ ಬಂದು ದೇವರ ಸೇವೆಯನ್ನು ಮಾಡಿದ ನಿಮ್ಮೆಲ್ಲರನ್ನು ಮಹಾ ಗಣಪತಿ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿ ಬೀಳ್ಕೊಟ್ಟರು.

Related posts

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya
error: Content is protected !!