27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

ದ ಕ ಜಿಲ್ಲಾ ಪಂಚಾಯತ್ , ತಾ ಪಂ ಬೆಳ್ತಂಗಡಿ, ಸಮಾಜಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಬಳಂಜ
ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ. 08 ರಂದು ಬಳಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.


ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಮಾಧವ್ ಜಾಥ ಕೆಕೆ ಚಾಲನೆ ನೀಡಿದರು..


ಪಂಚಾಯತ್ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ, ಸದಸ್ಯರಾದ ರವೀಂದ್ರ ಅಮೀನ್, ಬೇಬಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ಮ್ಯಾನೇಜರ್ ಧನಂಜಯ್, ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿ ಒಕ್ಕೂಟದ ಪದಾಧಿಕಾರಿಗಳು,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಳಂಜ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ತಾಲೂಕು ಐಇಸಿ ಸಂಯೋಜಕಿ ವಿನಿಷ, ಪುನರ್ವಸತಿ ಕಾರ್ಯಕರ್ತೆ, ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಬುದ್ಧ ಬಸವ ಟ್ರಸ್ಟ್ ನ ಚೆನ್ನ ಕೇಶವ ಮುಂತಾದವರು ಭಾಗವಹಿಸಿದ್ದರು. ಸಂವಿಧಾನದ ಪ್ರಸ್ತಾವನೆಯನ್ನು ಸಹಾಯಕ ನಿರ್ದೇಶಕರು ಬೋಧಿಸಿದರು.


ಸಂವಿಧಾನ ಕುರಿತಾದ ಸ್ಪರ್ಧೆಗಳ ವಿಜೇತರಿಗೆ ಅಭಿನಂದಿಸಲಾಯಿತು.
ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಗೀತೆ ಮತ್ತು ನಾಟಕಗಳನ್ನು ಪ್ರದರ್ಶಿಸಲಾಯಿತು.
ನಂತರ ಬಳಂಜ ದವರೆಗೆ ಸಂವಿಧಾನ ಜಾಗೃತಿ ಮೆರವಣಿಗೆ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿನಂದಿಸಿದರು.

Related posts

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!