July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

ದ ಕ ಜಿಲ್ಲಾ ಪಂಚಾಯತ್ , ತಾ ಪಂ ಬೆಳ್ತಂಗಡಿ, ಸಮಾಜಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಬಳಂಜ
ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ. 08 ರಂದು ಬಳಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.


ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಮಾಧವ್ ಜಾಥ ಕೆಕೆ ಚಾಲನೆ ನೀಡಿದರು..


ಪಂಚಾಯತ್ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ, ಸದಸ್ಯರಾದ ರವೀಂದ್ರ ಅಮೀನ್, ಬೇಬಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ಮ್ಯಾನೇಜರ್ ಧನಂಜಯ್, ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿ ಒಕ್ಕೂಟದ ಪದಾಧಿಕಾರಿಗಳು,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಳಂಜ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ತಾಲೂಕು ಐಇಸಿ ಸಂಯೋಜಕಿ ವಿನಿಷ, ಪುನರ್ವಸತಿ ಕಾರ್ಯಕರ್ತೆ, ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಬುದ್ಧ ಬಸವ ಟ್ರಸ್ಟ್ ನ ಚೆನ್ನ ಕೇಶವ ಮುಂತಾದವರು ಭಾಗವಹಿಸಿದ್ದರು. ಸಂವಿಧಾನದ ಪ್ರಸ್ತಾವನೆಯನ್ನು ಸಹಾಯಕ ನಿರ್ದೇಶಕರು ಬೋಧಿಸಿದರು.


ಸಂವಿಧಾನ ಕುರಿತಾದ ಸ್ಪರ್ಧೆಗಳ ವಿಜೇತರಿಗೆ ಅಭಿನಂದಿಸಲಾಯಿತು.
ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಗೀತೆ ಮತ್ತು ನಾಟಕಗಳನ್ನು ಪ್ರದರ್ಶಿಸಲಾಯಿತು.
ನಂತರ ಬಳಂಜ ದವರೆಗೆ ಸಂವಿಧಾನ ಜಾಗೃತಿ ಮೆರವಣಿಗೆ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿನಂದಿಸಿದರು.

Related posts

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!