September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

ದ ಕ ಜಿಲ್ಲಾ ಪಂಚಾಯತ್ , ತಾ ಪಂ ಬೆಳ್ತಂಗಡಿ, ಸಮಾಜಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಬಳಂಜ
ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ. 08 ರಂದು ಬಳಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.


ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಮಾಧವ್ ಜಾಥ ಕೆಕೆ ಚಾಲನೆ ನೀಡಿದರು..


ಪಂಚಾಯತ್ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ, ಸದಸ್ಯರಾದ ರವೀಂದ್ರ ಅಮೀನ್, ಬೇಬಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ಮ್ಯಾನೇಜರ್ ಧನಂಜಯ್, ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿ ಒಕ್ಕೂಟದ ಪದಾಧಿಕಾರಿಗಳು,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಳಂಜ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ತಾಲೂಕು ಐಇಸಿ ಸಂಯೋಜಕಿ ವಿನಿಷ, ಪುನರ್ವಸತಿ ಕಾರ್ಯಕರ್ತೆ, ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಬುದ್ಧ ಬಸವ ಟ್ರಸ್ಟ್ ನ ಚೆನ್ನ ಕೇಶವ ಮುಂತಾದವರು ಭಾಗವಹಿಸಿದ್ದರು. ಸಂವಿಧಾನದ ಪ್ರಸ್ತಾವನೆಯನ್ನು ಸಹಾಯಕ ನಿರ್ದೇಶಕರು ಬೋಧಿಸಿದರು.


ಸಂವಿಧಾನ ಕುರಿತಾದ ಸ್ಪರ್ಧೆಗಳ ವಿಜೇತರಿಗೆ ಅಭಿನಂದಿಸಲಾಯಿತು.
ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಗೀತೆ ಮತ್ತು ನಾಟಕಗಳನ್ನು ಪ್ರದರ್ಶಿಸಲಾಯಿತು.
ನಂತರ ಬಳಂಜ ದವರೆಗೆ ಸಂವಿಧಾನ ಜಾಗೃತಿ ಮೆರವಣಿಗೆ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿನಂದಿಸಿದರು.

Related posts

ವರಮಹಾಲಕ್ಷ್ಮೀ ಪ್ರಯುಕ್ತ ಸುನಿಲ್ ಸಿಲ್ಕ್ಸ್ ಸಾರೀಸ್‌ನಿಂದ ಲಕ್ಕಿಡಿಪ್ ಡ್ರಾ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಮಾಲಾಡಿ ಸ. ಉ. ಪ್ರಾ. ಶಾಲೆಯಲ್ಲಿ ಪೋಷಕ ರಕ್ಷಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!