25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

ತೆಕ್ಕಾರು: ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯಬಿ.ಅಬ್ದುಲ್ ರಝಾಕ್‌ ಅವರು‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷತೆಯಲ್ಲಿ ಕಳೆದ ಸೆ.25 ರಂದು ಜರಗಿದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ತೆರೆಯುವಂತೆ ಅಬ್ದುಲ್ ರಝಾಕ್ ಮನವಿಯನ್ನು ಸಲ್ಲಿಸಿದ್ದರು.

ಈ ಮನವಿಗೆ ಸಚಿವರು ಮತ್ತು ಆರೋಗ್ಯ ಇಲಾಖೆಯವರು ಸ್ಪಂದಿಸಿ ಉಪ ಆರೋಗ್ಯ ಕೇಂದ್ರವನ್ನು ಮಂಜೂರು ಗೊಳಿಸಿದ್ದಾರೆ. ಆದರೆ ಉಪ ಆರೋಗ್ಯ ಕೇಂದ್ರವನ್ನು ತೆರೆಯಲು ಸ್ವಂತ ಕಟ್ಟಡ ಇರುವುದಿಲ್ಲ ಈಗ ಬಾಡಿಗೆ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರವನ್ನು ತೆರೆದಿರುತ್ತೇವೆ. ಕಳೆದ ಏಳು ವರ್ಷಗಳಿಂದ ಅಬ್ದುಲ್ ರಝಾಕ್ ಅವರು ತೆಕ್ಕಾರಿನಲ್ಲಿ ಉಪ ಆರೋಗ್ಯ ಕೇಂದ್ರ ಮಂಜೂರಾತಿಗೆ ಹೋರಾಟ ನಡೆಸುತ್ತಿದ್ದು, ಅದರಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 63/1ಪಿ1 ರಲ್ಲಿ 0.10 ಸೆಂಟ್ಸ್ ವಿಸ್ತೀರ್ಣ ಈಗಾಗಲೇ ಉಪ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿಗೊಂಡು ದಾಖಲೆ ಪತ್ರಗಳು ಇರುತ್ತದೆ. ಆದ್ದರಿಂದ ಉಪ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಬೇಕಾಗಿ ತೆಕ್ಕಾರು ಗ್ರಾಮದ ಸಮಸ್ತ ನಾಗರಿಕರ ಪರವಾಗಿ ಅಬ್ದುಲ್ ರಝಾಕ್ ಅವರು ಸಚಿವರಲ್ಲಿ ವಿನಂತಿಸಿಕೊಂಡಿದ್ದಾರೆ.

Related posts

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!