April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಫೆ.7ರಂದು ಜರಗಿತು.

NRLM ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳಿಂದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಹಾಗೂ ಪ್ರತಿಮೆಗೆ ಹಾರಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಲಾಯಿತು. ಸಂವಿಧಾನ ಜಾಗೃತಿ ಕುರಿತು ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳು ಜಾಥಾ ಕಾರ್ಯಕ್ರಮದಲ್ಲಿ ಘೋಷವಾಕ್ಯಗಳನ್ನು ಕೂಗಿದರು. ಸಂವಿಧಾನ ಜಾಗೃತಿ ರಥವು ಕರಂಬಾರು ಗ್ರಾಮದ ಶಾಂತಿನಗರದಿಂದ ಹೊರಟು ಗ್ರಾಮ ಪಂಚಾಯತ್ ವಠಾರಕ್ಕೆ ಮೆರವಣಿಗೆಯ ಮೂಲಕ ಸಂಚರಿಸಿತು. ಸಂವಿಧಾನ ಜಾಗೃತಿ ಜಾಥಾ ಜೊತೆ ಬಂದ ಮಂಗಳೂರು ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮ್ಯಾನೇಜರ್ ಮತ್ತು ಇತರ ಅಧಿಕಾರಿ ವರ್ಗದವರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ಅಧ್ಯಕ್ಷರುಗಳು, ಶಿರ್ಲಾಲು ಹಾಗೂ ಕರಂಬಾರು ಶಾಲಾ ಶಿಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!