ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಕ್ಷೇತ್ರದ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸುವ ದೃಷ್ಟಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳನ್ನು ಫೆ.06 ರಂದು ಕ್ಷೇತ್ರದ ಕಚೇರಿಯಲ್ಲಿ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ವ್ಯವಸ್ಥಾಪನ ಸಮಿತಿಯ ವತಿಯಿಂದ ಶಾಲು ಹೊದಿಸಿ ಸಿಹಿ ತಿಂಡಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಸಿಬ್ಬಂದಿಗಳು ಹಾಗೂ ಅರ್ಚಕರು ಸಮಿತಿಯ ಮೇಲೆ ಅತ್ಯಂತ ವಿಶ್ವಾಸವಿಟ್ಟು ಕೆಲಸವನ್ನು ನಿರ್ವಹಿಸಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರೀತಿ ವಿಶ್ವಾಸದಿಂದ ಸಮಿತಿಯ ಮೇಲೆ ವಿಶ್ವಾಸವಿಟ್ಟು ಎಲ್ಲರನ್ನೂ ಅತ್ಯಂತ ಗೌರವದಿಂದ ಕಾಣುತ್ತಾ ಕೆಲಸ ನಿರ್ವಹಿಸಿ ಗಣಪತಿಯ ಸೇವೆಯನ್ನು ಮಾಡಿದ ಸಮಿತಿಯ ಎಲ್ಲರನ್ನೂ ಭಾವನಾತ್ಮಕವಾಗಿ ಅಭಿನಂದಿಸಿದರು.


ಫೆ.07 ರಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಇವರ ಉಪಸ್ಥಿತಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು, ನಿರ್ಗಮಿತ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಅರ್ಚಕರು ಹಾಗೂ ಎಲ್ಲಾ ಸದಸ್ಯರನ್ನು ದೇವಳದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಇವರು ದೇವರ ಎದುರಿನಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ಸಮಿತಿಯ ಎಲ್ಲರಿಗೂ ಗಣಪತಿ ದೇವರು ಕರೆದಾಗ ರಾತ್ರಿ ಹಗಲು ಎನ್ನದೆ ಬಂದು ದೇವರ ಸೇವೆಯನ್ನು ಮಾಡಿದ ನಿಮ್ಮೆಲ್ಲರನ್ನು ಮಹಾ ಗಣಪತಿ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿ ಬೀಳ್ಕೊಟ್ಟರು.

Related posts

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya
error: Content is protected !!