25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಕ್ಷೇತ್ರದ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸುವ ದೃಷ್ಟಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳನ್ನು ಫೆ.06 ರಂದು ಕ್ಷೇತ್ರದ ಕಚೇರಿಯಲ್ಲಿ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ವ್ಯವಸ್ಥಾಪನ ಸಮಿತಿಯ ವತಿಯಿಂದ ಶಾಲು ಹೊದಿಸಿ ಸಿಹಿ ತಿಂಡಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಸಿಬ್ಬಂದಿಗಳು ಹಾಗೂ ಅರ್ಚಕರು ಸಮಿತಿಯ ಮೇಲೆ ಅತ್ಯಂತ ವಿಶ್ವಾಸವಿಟ್ಟು ಕೆಲಸವನ್ನು ನಿರ್ವಹಿಸಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರೀತಿ ವಿಶ್ವಾಸದಿಂದ ಸಮಿತಿಯ ಮೇಲೆ ವಿಶ್ವಾಸವಿಟ್ಟು ಎಲ್ಲರನ್ನೂ ಅತ್ಯಂತ ಗೌರವದಿಂದ ಕಾಣುತ್ತಾ ಕೆಲಸ ನಿರ್ವಹಿಸಿ ಗಣಪತಿಯ ಸೇವೆಯನ್ನು ಮಾಡಿದ ಸಮಿತಿಯ ಎಲ್ಲರನ್ನೂ ಭಾವನಾತ್ಮಕವಾಗಿ ಅಭಿನಂದಿಸಿದರು.


ಫೆ.07 ರಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಇವರ ಉಪಸ್ಥಿತಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು, ನಿರ್ಗಮಿತ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಅರ್ಚಕರು ಹಾಗೂ ಎಲ್ಲಾ ಸದಸ್ಯರನ್ನು ದೇವಳದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಇವರು ದೇವರ ಎದುರಿನಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ಸಮಿತಿಯ ಎಲ್ಲರಿಗೂ ಗಣಪತಿ ದೇವರು ಕರೆದಾಗ ರಾತ್ರಿ ಹಗಲು ಎನ್ನದೆ ಬಂದು ದೇವರ ಸೇವೆಯನ್ನು ಮಾಡಿದ ನಿಮ್ಮೆಲ್ಲರನ್ನು ಮಹಾ ಗಣಪತಿ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿ ಬೀಳ್ಕೊಟ್ಟರು.

Related posts

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!