23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ ಮತ್ತು ಶ್ರೀ ವರಾಹಿ, ಮಂತ್ರಮೂರ್ತಿ, ನಾಗಕಲ್ಲುರ್ಟಿ ಶಕ್ತಿದೇವತೆ, ಕೊರಗಜ್ಜ ಮತ್ತು ಶ್ರೀ ಗುಳಿಗರಾಜ ದೈವಗಳ ಕಾಲಾವಧಿ ನೇಮೋತ್ಸವವು ಫೆ.12 ಮತ್ತು ಫೆ.13 ರಂದು ಜರುಗಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ ಅವರು ತಿಳಿಸಿದ್ದಾರೆ.


ಫೆ.12 ರಂದು ಬೆಳಿಗ್ಗೆ ಗಣಹೋಮ, ನಾಗಬ್ರಹ್ಮ ದೇವರಿಗೆ ತನುತಂಬಿಲ, ಆಶ್ಲೇಷಬಲಿ, ದೈವಗಳಿಗೆ ಪಂಚಪರ್ವ, ರಾತ್ರಿ ಶ್ರೀ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ. ಬಳಿಕ ಉದ್ಭವ ಗಣಪತಿ ದೇವರಿಗೆ ಹಾಗೂ ಶ್ರೀನಾಗಾಂಬಿಕಾ ಅಮ್ಮನವರಿಗೆ ಜೋಡುರಂಗಪೂಜೆ ನಡೆಯಲಿದೆ. ಫೆ.೧೩ರಂದು ಬೆಳಿಗ್ಗೆ ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ ರಾತ್ರಿ ಭಂಡಾರ ಇಳಿಯುವುದು, ದೈವಗಳ ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ, ನಂತರ ದೈವಗಳ ನೇಮೋತ್ಸವ, ಕೊರಗಜ್ಜ ಕೋಲ, ಮರುದಿನ ಬೆಳಿಗ್ಗೆ ಗುಳಿಗ ದೈವದ ಕೋಲ ಜರುಗಲಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya
error: Content is protected !!