25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ ಮತ್ತು ಶ್ರೀ ವರಾಹಿ, ಮಂತ್ರಮೂರ್ತಿ, ನಾಗಕಲ್ಲುರ್ಟಿ ಶಕ್ತಿದೇವತೆ, ಕೊರಗಜ್ಜ ಮತ್ತು ಶ್ರೀ ಗುಳಿಗರಾಜ ದೈವಗಳ ಕಾಲಾವಧಿ ನೇಮೋತ್ಸವವು ಫೆ.12 ಮತ್ತು ಫೆ.13 ರಂದು ಜರುಗಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ ಅವರು ತಿಳಿಸಿದ್ದಾರೆ.


ಫೆ.12 ರಂದು ಬೆಳಿಗ್ಗೆ ಗಣಹೋಮ, ನಾಗಬ್ರಹ್ಮ ದೇವರಿಗೆ ತನುತಂಬಿಲ, ಆಶ್ಲೇಷಬಲಿ, ದೈವಗಳಿಗೆ ಪಂಚಪರ್ವ, ರಾತ್ರಿ ಶ್ರೀ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ. ಬಳಿಕ ಉದ್ಭವ ಗಣಪತಿ ದೇವರಿಗೆ ಹಾಗೂ ಶ್ರೀನಾಗಾಂಬಿಕಾ ಅಮ್ಮನವರಿಗೆ ಜೋಡುರಂಗಪೂಜೆ ನಡೆಯಲಿದೆ. ಫೆ.೧೩ರಂದು ಬೆಳಿಗ್ಗೆ ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ ರಾತ್ರಿ ಭಂಡಾರ ಇಳಿಯುವುದು, ದೈವಗಳ ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ, ನಂತರ ದೈವಗಳ ನೇಮೋತ್ಸವ, ಕೊರಗಜ್ಜ ಕೋಲ, ಮರುದಿನ ಬೆಳಿಗ್ಗೆ ಗುಳಿಗ ದೈವದ ಕೋಲ ಜರುಗಲಿದೆ ಎಂದು ತಿಳಿಸಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
error: Content is protected !!