25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ ಮತ್ತು ಶ್ರೀ ವರಾಹಿ, ಮಂತ್ರಮೂರ್ತಿ, ನಾಗಕಲ್ಲುರ್ಟಿ ಶಕ್ತಿದೇವತೆ, ಕೊರಗಜ್ಜ ಮತ್ತು ಶ್ರೀ ಗುಳಿಗರಾಜ ದೈವಗಳ ಕಾಲಾವಧಿ ನೇಮೋತ್ಸವವು ಫೆ.12 ಮತ್ತು ಫೆ.13 ರಂದು ಜರುಗಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ ಅವರು ತಿಳಿಸಿದ್ದಾರೆ.


ಫೆ.12 ರಂದು ಬೆಳಿಗ್ಗೆ ಗಣಹೋಮ, ನಾಗಬ್ರಹ್ಮ ದೇವರಿಗೆ ತನುತಂಬಿಲ, ಆಶ್ಲೇಷಬಲಿ, ದೈವಗಳಿಗೆ ಪಂಚಪರ್ವ, ರಾತ್ರಿ ಶ್ರೀ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ. ಬಳಿಕ ಉದ್ಭವ ಗಣಪತಿ ದೇವರಿಗೆ ಹಾಗೂ ಶ್ರೀನಾಗಾಂಬಿಕಾ ಅಮ್ಮನವರಿಗೆ ಜೋಡುರಂಗಪೂಜೆ ನಡೆಯಲಿದೆ. ಫೆ.೧೩ರಂದು ಬೆಳಿಗ್ಗೆ ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ ರಾತ್ರಿ ಭಂಡಾರ ಇಳಿಯುವುದು, ದೈವಗಳ ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ, ನಂತರ ದೈವಗಳ ನೇಮೋತ್ಸವ, ಕೊರಗಜ್ಜ ಕೋಲ, ಮರುದಿನ ಬೆಳಿಗ್ಗೆ ಗುಳಿಗ ದೈವದ ಕೋಲ ಜರುಗಲಿದೆ ಎಂದು ತಿಳಿಸಿದ್ದಾರೆ.

Related posts

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
error: Content is protected !!