25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ, ಹಾಗೂ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya
error: Content is protected !!