23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

ದ ಕ ಜಿಲ್ಲಾ ಪಂಚಾಯತ್ , ತಾ ಪಂ ಬೆಳ್ತಂಗಡಿ, ಸಮಾಜಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಬಳಂಜ
ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ. 08 ರಂದು ಬಳಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.


ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಮಾಧವ್ ಜಾಥ ಕೆಕೆ ಚಾಲನೆ ನೀಡಿದರು..


ಪಂಚಾಯತ್ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ, ಸದಸ್ಯರಾದ ರವೀಂದ್ರ ಅಮೀನ್, ಬೇಬಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ಮ್ಯಾನೇಜರ್ ಧನಂಜಯ್, ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿ ಒಕ್ಕೂಟದ ಪದಾಧಿಕಾರಿಗಳು,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಳಂಜ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ತಾಲೂಕು ಐಇಸಿ ಸಂಯೋಜಕಿ ವಿನಿಷ, ಪುನರ್ವಸತಿ ಕಾರ್ಯಕರ್ತೆ, ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಬುದ್ಧ ಬಸವ ಟ್ರಸ್ಟ್ ನ ಚೆನ್ನ ಕೇಶವ ಮುಂತಾದವರು ಭಾಗವಹಿಸಿದ್ದರು. ಸಂವಿಧಾನದ ಪ್ರಸ್ತಾವನೆಯನ್ನು ಸಹಾಯಕ ನಿರ್ದೇಶಕರು ಬೋಧಿಸಿದರು.


ಸಂವಿಧಾನ ಕುರಿತಾದ ಸ್ಪರ್ಧೆಗಳ ವಿಜೇತರಿಗೆ ಅಭಿನಂದಿಸಲಾಯಿತು.
ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಗೀತೆ ಮತ್ತು ನಾಟಕಗಳನ್ನು ಪ್ರದರ್ಶಿಸಲಾಯಿತು.
ನಂತರ ಬಳಂಜ ದವರೆಗೆ ಸಂವಿಧಾನ ಜಾಗೃತಿ ಮೆರವಣಿಗೆ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿನಂದಿಸಿದರು.

Related posts

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya
error: Content is protected !!