September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

ಕಕ್ಕಿಂಜೆ : ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯ  ಸೇವಾ ಯೋಜನೆಯಾದ ಶ್ರೀ ಕೃಷ್ಣ ಯೋಗಕ್ಷೇಮ (ಮನೆಬಾಗಿಲಿಗೆ ವೈದ್ಯಕೀಯ ಸೇವೆ) ಇದರ  ವಿಸ್ತರಣೆ ಮತ್ತು ವಿಸ್ತೃತ ವಸತಿ ಸಮುುಚ್ಚಯ ಹಾಗೂ ಶ್ರೀ ಕೃಷ್ಣ ಯೋಗಕ್ಷೇಮಕ್ಕೆ ನೂತನ ಅಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಫೆ 8 ರಂದು  ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು   ಕೆ ಎಂ ಸಿ ಆಸ್ಪತ್ರೆಯ ಖ್ಯಾತ ಹೃದಯರೋಗ ತಜ್ಞರಾದ ಡಾ. ಎಂ ಎನ್ ಭಟ್ ಉದ್ಘಾಟಿಸಿ  ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಇಂತಹ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿ ಜನರಿಗೆ ಉತ್ಕೃಷ್ಟ ಗುಣಮಟ್ಟದ ವೈದ್ಯಕೀಯ ಸೇವೆ ನೀಡುವುದರ ಜೊತೆಗೆ ಮನೆಬಾಗಿಲಿಗೆ ವೈದ್ಯಕೀಯ ಸೇವೆ ಎಂಬ ಅಪೂರ್ವ  ಸೇವಾ ಯೋಜನೆಯನ್ನು ಸುಮಾರು ಎಂಟು ವರ್ಷಗಳ ಹಿಂದೆ ಪ್ರಾರಂಭಿಸಿ ಮುನ್ನಡೆಸುತ್ತಿರುವ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರ ಸೇವಾ ಕಾರ್ಯವನ್ನು ಶ್ಲಾಘಿಸಿದರು.  ಅವರು ಹೃದಯ ರೋಗ ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ  ಡಾ.ಮುರಳಿಕೃಷ್ಣ ಇರ್ವತ್ರಾಯ ಪ್ರಾಸ್ತಾವಿಕ ಮಾತನಾಡಿ ಶ್ರೀ ಕೃಷ್ಣ ಯೋಗಕ್ಷೇಮ ಯೋಜನೆಯ ಸೌಲಭ್ಯವನ್ನು   ಬೆಳ್ತಂಗಡಿ ತಾಲೂಕಿನಾದ್ಯಂತ ವಿಸ್ತರಿಸಲಾಗಿದೆ ಹಾಗೂ ಆಸ್ಪತ್ರೆಗೆ ಹೋಗಲು ಅಸಾಧ್ಯವಾದ ಹಾಸಿಗೆ ಹಿಡಿದ ವೃದ್ಧರು ಹಾಗೂ  ರೋಗಿಗಳಿಗೆ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬಹುದಾಗಿದೆ ಎಂದರು. 

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ  ವಸಂತ ಮಂಜಿತ್ತಾಯ ಶುಭಾಶಂಸನೆಗೈದರು.  ಕಾರ್ಯಕ್ರಮದಲ್ಲಿ ಉದ್ಯಮಿಗಳಾದ  ಗಿರೀಶ್ ಕುದ್ರೆಂತಾಯ, ಮುಂಡಾಜೆ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ಗೌಡ ನೂಜಿ , ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನ ಆಡಳಿತ ನಿರ್ದೇಶಕ ನವೀನ್ ಭಟ್ ತಳವಾರ್, ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ  ಅಧ್ಯಕ್ಷ  ರಾಘವೇಂದ್ರ ಬೈಪಡಿತ್ತಾಯ,  ಶಂಕರನಾರಾಯಣ ಕೊಡಂಚ, ರಾಜ್ ಪ್ರಸಾದ್ ಪೊಲ್ನಾಯ, ಕರ್ನಾಟಕ ಬ್ಯಾಂಕ್ ನೆರಿಯ ಶಾಖೆ ಪ್ರಬಂಧಕ ಅವಿನಾಶ್,ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಆಸ್ಪತ್ರೆಯ ವೈದ್ಯರುಗಳಾದ ಡಾ.ಅಲ್ಬಿನ್ ಜೋಸೆಫ್,ಡಾ.ಮೌಲ್ಯ,ಡಾ.ಅಖಿಲ್ ರಾಜ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ  ಶ್ರೀ ಕೃಷ್ಣ ಯೋಗಕ್ಷೇಮ ಯೋಜನೆಯಲ್ಲಿ  ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸಿದ ಡಾ.ಅಲ್ಬಿನ್ ಜೋಸೆಫ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ.ವಂದನಾ ಎಂ ಇರ್ವತ್ರಾಯ ಸ್ವಾಗತಿಸಿ ,ಆರಿಶ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ವಿನಯ ಕಿಶೋರ್ ಶೆಟ್ಟಿ ಧನ್ಯವಾದವಿತ್ತರು. ಗಣೇಶ್  ಕಾರ್ಯಕ್ರಮ ನಿರ್ವಹಿಸಿದರು.  

Related posts

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya
error: Content is protected !!