25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya
error: Content is protected !!