ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya
error: Content is protected !!