25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು 8ರಂದು ನಡೆಯಿತು.

ಫೆ.7ರಂದು ಬೆಳಿಗ್ಗೆ ಹುಂಬೆಜೆ ಪಲ್ಕೆಯಲ್ಲಿ ಸಾರಿ ಹಾಕುವುದು ಮತ್ತು ಕಬೆ ಮುಹೂರ್ತ, ಚೆಂಡು ಇತ್ಯಾದಿ, ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ರಾತ್ರಿ ಹುಂಬೆಜೆಪಲ್ಕೆಯಲ್ಲಿ ಕಲಶ ಶುದ್ಧಿ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪ್ರತಿಷ್ಠೆ ಹಾಗೂ ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮ ನಡೆಯಿತು.

ಫೆ.8ರಂದು ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಟು. ಬೋವಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪಂಚ ವರ್ಣ, ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಕೊಡಮಣಿತ್ತಾಯ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ ಜರುಗಿತು. ನೂರಾರು ಭಕ್ತರು ಭಾಗವಹಿಸಿದ್ದರು.

ನಿಟ್ಟಡ್ಕ ಜೋಗಿ ಪುರುಷರ ಬಳಗದಿಂದ ಕೊಡಮಣಿತ್ತಾಯ ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ಮಾಡಲಾಯಿತು.

ಚಿತ್ರ: ನೇಸರ ಕಟ್ಟೆ

Related posts

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya
error: Content is protected !!