23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

ಉಜಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಉಜಿರೆ ವಲಯ ಇವರ ಸಹಕಾರದಲ್ಲಿ10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಉಜಿರೆಯ ಚಿತ್ತಾರ ಟೈಲರಿಂಗ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆರವರು ಯಶಸ್ವಿಯಾಗಿ ತರಬೇತಿ ಮುಗಿಸಿದ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದರು. ತರಬೇತಿ ಪಡೆದ ಮಹಿಳೆಯರು ಬ್ಯಾಂಕ್ ಸೌಲಭ್ಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ಉಪಯೋಗಿಸಿ ಸ್ವಂತ ಉದ್ಯೋಗ ಕೈಗೊಳ್ಳಲು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆಯ ಮುಖ್ಯ ನಿಬಂಧಕಾರದ ಪ್ರಸಾದ್ ಬಿ. ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಮಾಡಲು ಮಹಿಳೆಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ,ರಾಜ್ಯ ಟೈಲರ್ ಒಕ್ಕೂಟದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ವಲಯ ಅಧ್ಯಕ್ಷರಾದ ರೂಪ ಜಗದೀಶ್, ವಲಯ ಕಾರ್ಯದರ್ಶಿ ಜೀನತ್, ಕ್ಷೇತ್ರ ಕಾರ್ಯದರ್ಶಿ ನಾಗೇಶ್, ತರಬೇತುದಾರರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.

ಜಯ ಚಿದಾನಂದ್ ಕಾರ್ಯಕ್ರಮ ನಿರೂಪಣೆ ಮಾಡಿದರು.ಉಜಿರೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 28 ಮಹಿಳೆಯರು ಈ 10 ದಿವಸದ ತರಬೇತಿಯನ್ನು ಪಡೆದು ಪ್ರಮಾಣ ಪತ್ರ ಪಡೆದರು.

Related posts

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!