38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು.

ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ, ಬೊಳ್ಯ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಫೆ.10ರಂದು ತೋರಣ ಮುಹೂರ್ತ, ಮಧ್ಯಾಹ್ನ ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು, ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು, ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬ್ರಹ್ಮರು, ರುದ್ರಚಾಮುಂಡಿ, ಕಲ್ಕುಡ, ಪಂಜುರ್ಲಿ ಇತ್ಯಾದಿ ದೈವಗಳ ನೇಮೋತ್ಸವ ಜರುಗಲಿದೆ. ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ ನೇಮೋತ್ಸವ ನಡೆಯಲಿರುವುದು. ಫೆ.12ರಂದು ಬೆಳಿಗ್ಗೆ ಶುದ್ಧ ಕಲಶ, ತಂಬಿಲ ನಡೆಯಲಿದೆ.

Related posts

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya
error: Content is protected !!