25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು.

ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ, ಬೊಳ್ಯ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಫೆ.10ರಂದು ತೋರಣ ಮುಹೂರ್ತ, ಮಧ್ಯಾಹ್ನ ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು, ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು, ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬ್ರಹ್ಮರು, ರುದ್ರಚಾಮುಂಡಿ, ಕಲ್ಕುಡ, ಪಂಜುರ್ಲಿ ಇತ್ಯಾದಿ ದೈವಗಳ ನೇಮೋತ್ಸವ ಜರುಗಲಿದೆ. ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ ನೇಮೋತ್ಸವ ನಡೆಯಲಿರುವುದು. ಫೆ.12ರಂದು ಬೆಳಿಗ್ಗೆ ಶುದ್ಧ ಕಲಶ, ತಂಬಿಲ ನಡೆಯಲಿದೆ.

Related posts

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!