April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು.

ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ, ಬೊಳ್ಯ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಫೆ.10ರಂದು ತೋರಣ ಮುಹೂರ್ತ, ಮಧ್ಯಾಹ್ನ ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು, ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು, ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬ್ರಹ್ಮರು, ರುದ್ರಚಾಮುಂಡಿ, ಕಲ್ಕುಡ, ಪಂಜುರ್ಲಿ ಇತ್ಯಾದಿ ದೈವಗಳ ನೇಮೋತ್ಸವ ಜರುಗಲಿದೆ. ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ ನೇಮೋತ್ಸವ ನಡೆಯಲಿರುವುದು. ಫೆ.12ರಂದು ಬೆಳಿಗ್ಗೆ ಶುದ್ಧ ಕಲಶ, ತಂಬಿಲ ನಡೆಯಲಿದೆ.

Related posts

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!