25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು.

ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ, ಬೊಳ್ಯ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಫೆ.10ರಂದು ತೋರಣ ಮುಹೂರ್ತ, ಮಧ್ಯಾಹ್ನ ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು, ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು, ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬ್ರಹ್ಮರು, ರುದ್ರಚಾಮುಂಡಿ, ಕಲ್ಕುಡ, ಪಂಜುರ್ಲಿ ಇತ್ಯಾದಿ ದೈವಗಳ ನೇಮೋತ್ಸವ ಜರುಗಲಿದೆ. ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ ನೇಮೋತ್ಸವ ನಡೆಯಲಿರುವುದು. ಫೆ.12ರಂದು ಬೆಳಿಗ್ಗೆ ಶುದ್ಧ ಕಲಶ, ತಂಬಿಲ ನಡೆಯಲಿದೆ.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya
error: Content is protected !!